Thursday, January 29, 2026

PARYAYA: ಹಿಂದೂ ಸಮಾಜೋತ್ಸವ- ಭಾರ್ಗವ ವಿಜಯ

 ಹಿಂದೂ ಸಮಾಜೋತ್ಸವ- ಭಾರ್ಗವ ವಿಜಯ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರ ಸಮೀಪದ ಚೊಕ್ಕನಹಳ್ಳಿಯಲ್ಲಿ ೨೦೨೫ ಜನವರಿ ೨೫ರ ಭಾನುವಾರ ಹಿಂದೂ ಸಮಾಜೋತ್ಸವ ನಡೆಯಿತು.

ಈ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳ ಜೊತೆಗೆ ಬೆಂಗಳೂರಿನ ಯಕ್ಷ ಕಲಾ ಕೌಸ್ತುಭ ತಂಡದಿಂದ ʼಭಾರ್ಗವ ವಿಜಯʼ ಯಕ್ಷಗಾನ ಕಾರ್ಯಕ್ರಮ ನಡೆಯಿತು.






ಹಿಮ್ಮೇಳದಲ್ಲಿ ಭಾಗವತರು:ಉಮೇಶ ರಾಜ್ ಮಂದಾರ್ತಿ
ಮದ್ದಳೆ: ನರಸಿಂಹ ಆಚಾರ್ ಕೂರಾಡಿ 
ಚೆಂಡೆ:‌ ಸುಬ್ರಹ್ಮಣ್ಯ ಸಾಸ್ತಾನ
ವೇಷಭೂಷಣ: ಯಕ್ಷ ಕಲಾ ಕೌಸ್ತುಭ ಬೆಂಗಳೂರು
ಉದಯ ಮಂದಾರ್ತಿ,
ಗುರುರಾಜ್‌  ಬಿಲ್ಲಾಡಿ ನಡೆಸಿಕೊಟ್ಟರು.

ಮುಮ್ಮೇಳದಲ್ಲಿ ಪರಶುರಾಮ – ಶಿವಾಂಷ್
ಕಾರ್ತ್ಯವೀರ್ಯಾರ್ಜನ – ಆದ್ಯ ಕಶ್ಯಪ್
ಕಾಲಾಜ್ಞ – ಆದ್ಯ
ರೇಣುಕೆ -ಆದ್ಯ ಶ್ರೀವಲ್ಲಿ
ಜಮದಗ್ನಿ – ಉಮಾದೇವಿ
ಶತ್ರಜಿತು – ಪುಣ್ಯ

ರಂಗಸ್ಥಳಕ್ಕೆ ಕಳೆ ಕಟ್ಟಿದರು.

ಅದಕ್ಕೂ ಮುನ್ನ ಜನವರಿ ೨೪ರ ಭಾನುವಾರ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ದೇವಸ್ಥಾನದಲ್ಲಿ ತಂಡಕ್ಕಾಗಿ ತಂದ ಹೊಸ ಕಿರೀಟಗಳ ಪೂಜೆಯೂ ನಡೆಯಿತು.
ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ.

ಈ ಸಂದರ್ಭದ ಕೆಲವು ಚಿತ್ರಗಳು ಹಾಗೂ ಯಕ್ಷಗಾನ ಭಾರ್ಗವ ವಿಜಯದ ವಿಡಿಯೋಗಳು ಮೇಲಿವೆ.  ಯಕ್ಷಗಾನ/ ತಾಳಮದ್ದಳೆಯ ಹೆಚ್ಚಿನ ಸುದ್ದಿಗಳಿಗಾಗಿ  PARYAYA.COMನ ಯಕ್ಷಗಾನ/ತಾಳಮದ್ದಳೆ ಪುಟಕ್ಕೆ ಭೇಟಿ ನೀಡಿ. 

PARYAYA: ಹಿಂದೂ ಸಮಾಜೋತ್ಸವ- ಭಾರ್ಗವ ವಿಜಯ:   ಹಿಂದೂ ಸಮಾಜೋತ್ಸವ- ಭಾರ್ಗವ ವಿಜಯ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರ ಸಮೀಪದ ಚೊಕ್ಕನಹಳ್ಳಿಯಲ್ಲಿ ೨೦೨೫ ಜನವರಿ ೨೫ರ ಭಾನುವಾರ ಹಿಂದೂ ಸಮಾಜೋತ್ಸವ ನಡೆಯಿತು. ಈ ಸಂದರ್...

Monday, January 26, 2026

PARYAYA: ಗಣರಾಜ್ಯೋತ್ಸವ ಆಚರಣೆ

 ಗಣರಾಜ್ಯೋತ್ಸವ ಆಚರಣೆ

ಬೆಂಗಳೂರು ರಾಮೃಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯಲ್ಲಿ ಶ್ರೀ ಬಾಲಾಜಿ ಕೃಪಾ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ೨೦೨೬ ಜನವರಿ ೨೬ರ ಸೋಮವಾರ ೭೭ನೇ ಗಣರಾಜ್ಯೋತ್ಸವವನ್ನು ಸಂಭ್ರಮೋತ್ಸಾಹಗಳೊಂದಿಗೆ ಆಚರಿಸಲಾಯಿತು.

ಕರ್ನಾಟಕ ಸರ್ಕಾರದ ಉನ್ನಡ ಶಿಕ್ಷಣ ಇಲಾಖೆಯ ವಿಶೇಷ ಅಧಿಕಾರಿ ಹಾಗೂ ಮಹಾರಾಣಿ ಕ್ಲಸ್ಟರ್‌ ವಿಶ್ವವಿದ್ಯಾಲಯದ ಕಂಪ್ಯೂಟ್ರರ್‌ ವಿಜ್ಞಾನ ಪ್ರಾಧ್ಯಾಪಕ ಡಾ. ಭಾಗ್ಯವಾನ್‌ ಮುದಿಗೌಡ್ರ ಅವರು ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ತ್ರಿವರ್ಣ ಧ್ವಜವನ್ನು ಅರಳಿಸಿದರು.

ಬಡಾವಣೆಯ ನಿವಾಸಿಗಳು ಸಂಭ್ರಮದೊಂದಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಈ ಸಂದರ್ಭದ ಕೆಲವು ಚಿತ್ರಗಳು ಹಾಗೂ ವಿಡಿಯೋಗಳು ಇಲ್ಲಿವೆ.




ನವದೆಹಲಿಯಲ್ಲಿ ಗಣರಾಜ್ಯೋತ್ಸವ ಸಡಗರದ ದೃಶ್ಯ

PARYAYA: ಗಣರಾಜ್ಯೋತ್ಸವ ಆಚರಣೆ:   ಗಣರಾಜ್ಯೋತ್ಸವ ಆಚರಣೆ ಬೆಂ ಗಳೂರು ರಾಮೃಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯಲ್ಲಿ ಶ್ರೀ ಬಾಲಾಜಿ ಕೃಪಾ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂ...

Friday, January 23, 2026

PARYAYA: ಪಂಚಲಿಂಗೇಶ್ವರನ ಅವಭೃತ

 ಪಂಚಲಿಂಗೇಶ್ವರನ ಅವಭೃತ

ವಭೃತ (ದೇವನಾಗರಿಯಲ್ಲಿ ʼವಭೃʼಎಂದರೆ ವೈದಿಕ ಯಜ್ಞಗಳು ಅಥವಾ ಪ್ರಮುಖ ಧಾರ್ಮಿಕ ವಿಧಿವಿಧಾನಗಳು ಮುಗಿದ ನಂತರ ಯಜಮಾನನು ಮಾಡುವ ಪವಿತ್ರವಾದ ಮಂಗಳಸ್ನಾನ. ಇದು ಯಜ್ಞದ ಸಮಾಪ್ತಿಯನ್ನು ಸೂಚಿಸುವ ವಿಧಿಯಾಗಿದ್ದುಪಾಪ ಪರಿಹಾರ ಮತ್ತು ಶುದ್ಧೀಕರಣದ ಸಂಕೇತ. 


ಅವಭೃತದ ಮುಖ್ಯಾಂಶಗಳು:

  • ಯಜ್ಞಾಂತ ಸ್ನಾನ: ಪ್ರಧಾನ ಯಾಗ ಅಥವಾ ಯಜ್ಞ ಪೂರ್ಣಗೊಂಡ ನಂತರ ಮಾಡಲಾಗುವ ವಿಶೇಷ ಜಳಕ.
  • ಶುದ್ಧೀಕರಣ: ಯಜ್ಞದ ಸಮಯದಲ್ಲಿ ಉಂಟಾಗಬಹುದಾದ ದೋಷಗಳನ್ನು ಕಳೆದುಯಜಮಾನನನ್ನು ಶುದ್ಧಗೊಳಿಸುವ ಪ್ರಕ್ರಿಯೆ.
  • ಮಂಗಳ ಕಾರ್ಯ: ಇದು ಯಜ್ಞದ ಮುಕ್ತಾಯದ ಸೂಚಕವಾಗಿದ್ದುಯಶಸ್ಸನ್ನು ಸೂಚಿಸುತ್ತದೆ.
  • ನದಿ/ತೀರ್ಥ ಸ್ನಾನ: ಸಾಮಾನ್ಯವಾಗಿ ಹರಿಯುವ ನದಿ ಅಥವಾ ಪವಿತ್ರ ತೀರ್ಥಗಳಲ್ಲಿ ಈ ಸ್ನಾನವನ್ನು ಆಚರಿಸಲಾಗುತ್ತದೆ. 

ಸರಳವಾಗಿ ಹೇಳುವುದಾದರೆಯಜ್ಞದ ಕೊನೆಯಲ್ಲಿ ಆಚರಿಸಲಾಗುವ ಸಮಾರೋಪ ಸ್ನಾನವೇ 'ಅವಭೃತ'. ದೇವಾಲಯದ ವಾರ್ಷಿಕೋತ್ಸವ, ಜಾತ್ರೆ, ಆಯನ ಕೂಡಾ ದೇವರ ಶಕ್ತಿಯನ್ನು ಜಾಗೃತಗೊಳಿಸುವ ಯಜ್ಞ, ಹಾಗಾಗಿಯೇ ಆಯನದ ಕೊನೆಗೆ ಅವಭೃತ ನಡೆಯುತ್ತದೆ.

ವಿಟ್ಲಾಯನದ ಸಡಗರದ ರಥೋತ್ಸವದ ಮರುದಿನ ಕೊಡಂಗಾಯಿ ಹೊಳೆಯಲ್ಲಿ ವಿಟ್ಲದೊಡೆಯ ಪಂಚಲಿಂಗೇಶ್ವರನ ಅವಭೃತ ನಡೆಯುತ್ತದೆ. ಈ ಅವಭೃತಕ್ಕಾಗಿ ದೇವಸ್ಥಾನದಿಂದ ಕೊಡಂಗಾಯಿವರೆಗೆ ಸಾಗುವಾಗ  ದೇವಸ್ಥಾನದ ಕಟ್ಟೆಯಿಂದ ತೊಡಗಿ, ವಿವಿಧ ಕಟ್ಟೆಗಳಲ್ಲಿ ಪಂಚಲಿಂಗೇಶ್ವರನಿಗೆ ಪೂಜೆ ಸಲ್ಲುತ್ತದೆ. ಪ್ರತಿವರ್ಷವೂ ಈ ಕಟ್ಟೆಗಳಿಗೆ ದೇವರು ಬರುವ ಹೊತ್ತಿನಲ್ಲಿ ಆಸುಪಾಸಿನ ಜನರು ಭಕ್ತಿ ಪೂರ್ವಕವಾಗಿ ನೆರೆದು ಭಗವಂತನಿಗೆ ಕೈ ಮುಗಿಯುತ್ತಾರೆ.

ಅವಭೃತಕ್ಕಾಗಿ ಪಂಚಲಿಂಗೇಶ್ವರನು ಸಾಗುವ ದೃಶ್ಯದ ವಿಡಿಯೋ ಹಾಗೂ ಪಂಚಲಿಂಗೇಶ್ವರ ದೇವಸ್ಥಾನ ಹಾಗೂ ಸಮೀಪದ ನೆತ್ರಕೆರೆಯ ಎರಡು ಕಟ್ಟೆಗಳಲ್ಲಿ ನಡೆದ ಪಂಚಲಿಂಗನ ಪೂಜೆಯ ಚಿತ್ರ, ವಿಡಿಯೋಗಳು ಮೇಲಿವೆ. (ಚಿತ್ರ, ವಿಡಿಯೋ ಕೃಪೆ: ಸದಾಶಿವ ಬನ, ವಿಟ್ಲ ಸುದ್ದಿಗಳು ಗ್ರೂಪ್‌, ನೆತ್ರಕೆರೆ ಮಠ ಗ್ರೂಪ್)

ಅವಭೃತದ ಮರುದಿನ ಧ್ವಜಾವರತಣದೊಂದಿಗೆ ವಿಟ್ಲಾಯನದ ಸಡಗರ ಕೊನೆಗೊಳ್ಳುತ್ತದೆ.

PARYAYA: ಪಂಚಲಿಂಗೇಶ್ವರನ ಅವಭೃತ:   ಪಂಚಲಿಂಗೇಶ್ವರನ ಅವಭೃತ ಅ ವಭೃತ (ದೇವನಾಗರಿಯಲ್ಲಿ ʼ ಅವಬೃಥ ʼ ) ಎಂದರೆ ವೈದಿಕ ಯಜ್ಞಗಳು ಅಥವಾ ಪ್ರಮುಖ ಧಾರ್ಮಿಕ ವಿಧಿವಿಧಾನಗಳು ಮುಗಿದ ನಂತರ ಯಜಮಾನನು ಮಾಡುವ ಪವಿತ್ರ...

Thursday, January 22, 2026

PARYAYA: ವಿಟ್ಲ ತೇರಿನ ಸುಂದರ ಕ್ಷಣ!

 ವಿಟ್ಲ ತೇರಿನ ಸುಂದರ ಕ್ಷಣ!

ವಿಟ್ಲಾಯನದ ಮಹತ್ವದ ದಿನ ವಿಟ್ಲ ತೇರು ಮತ್ತು ಬೆಡಿಯ ದಿನ. ೨೦೨೬ರ ಜನವರಿ ೨೧ರಂದು ಈ ಸಂಭ್ರಮದ ಹೊತ್ತು.

ವಿಟ್ಲ ತೇರಿನ ಸುಂದರ ಕ್ಷಣದ ವಿಡಿಯೋ ಇಲ್ಲಿದೆ 👇👇.


ಇದನ್ನೂ ನೋಡಿ:

ವಿಟ್ಲ ಶ್ರೀ ಪಂಚಲಿಂಗೇಶ್ವರ ಜಾತ್ರೋತ್ಸವ ಆರಂಭ

PARYAYA: ವಿಟ್ಲ ತೇರಿನ ಸುಂದರ ಕ್ಷಣ!:  ವಿಟ್ಲ ತೇರಿನ ಸುಂದರ ಕ್ಷಣ! ವಿ ಟ್ಲಾಯನದ ಮಹತ್ವದ ದಿನ ವಿಟ್ಲ ತೇರು ಮತ್ತು ಬೆಡಿಯ ದಿನ. ೨೦೨೬ರ ಜನವರಿ ೨೧ರಂದು ಈ ಸಂಭ್ರಮದ ಹೊತ್ತು. ವಿಟ್ಲ ತೇರಿನ ಸುಂದರ ಕ್ಷಣದ ವಿಡಿ...

Wednesday, January 21, 2026

PARYAYA: ಹಿರಿಯ ಪತ್ರಕರ್ತರಿಗೆ ವೈದ್ಯಕೀಯ ಚಿಕಿತ್ಸೆಗೆ ಶೇ.75ರಷ್ಟು ...

ಹಿರಿಯ ಪತ್ರಕರ್ತರಿಗೆ ವೈದ್ಯಕೀಯ ಚಿಕಿತ್ಸೆಗೆ ಶೇ.75ರಷ್ಟು ರಿಯಾಯ್ತಿ

ಬೆಂಗಳೂರು: ಹಿರಿಯ ಪತ್ರಕರ್ತರಿಗೆ ಸರ್ಕಾರದ ವೈದ್ಯಕೀಯ ಶಿಕ್ಷಣ ಇಲಾಖಾ ವ್ಯಾಪ್ತಿಯಲ್ಲಿ ಬರುವ ಎಲ್ಲ ಆಸ್ಪತ್ರೆಗಳಲ್ಲಿ ವೈದ್ಯಕೀಯ ಚಿಕಿತ್ಸೆಗೆ ಶೇಕಡಾ 75ರಷ್ಟು ರಿಯಾಯಿತಿ ನೀಡಲಾಗುವುದು, ಉಳಿದ ಅಲ್ಪ ವೆಚ್ಚವನ್ನು ಹಿರಿಯ ಪತ್ರಕರ್ತರು ಪಾವತಿಸಿದರೆ ಸಾಕು ಎಂದು ರಾಜ್ಯ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಆರ್.‌ ಪಾಟೀಲ್‌ ಪ್ರಕಟಿಸಿದರು.

ಬೆಂಗಳೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಆಸ್ಪತ್ರೆಯ ಸಭಾಂಗಣದಲ್ಲಿ 2026 ಜನವರಿ 21ರ ಬುಧವಾರ ಹಿರಿಯ ಪತ್ರಕರ್ತರ ವೇದಿಕೆಯ ಸದಸ್ಯರಿಗೆ ʼಗುರುತಿನ ಚೀಟಿʼ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಸಚಿವರು ʼಸಮಾಜವನ್ನು ತಿದ್ದಿ ತೀಡಿ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತರಿಗೆ ವಿಶೇಷ ಸೌಲಭ್ಯ ಒದಗಿಸಬೇಕಾದ್ದು ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳಿದರು.

ವೈದ್ಯಕೀಯ ಶಿಕ್ಷಣ ಇಲಾಖೆಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಹಿರಿಯ ಪತ್ರಕರ್ತರ ವೇದಿಕೆ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮವನ್ನು ಸಂಘಟಿಸಲಾಗಿತ್ತು.

ಮುಖ್ಯಮಂತ್ರಿಗಳ ಜೊತೆ ಸಮಾಲೋಚಿಸಿ ಮುಂದಿನ ದಿನಗಳಲ್ಲಿ ಇನ್ನುಳಿದ ಶೇ. 25ರಷ್ಟು ಹಣದ ರಿಯಾಯ್ತಿ ನೀಡುವ ಬಗ್ಗೆಯೂ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟ ಪಡಿಸಿದರು.

ಪತ್ರಕರ್ತರು ನಮ್ಮ ಸರ್ಕಾರದ ಜವಾಬ್ದಾರಿನಿವೃತ್ತರಾದ ಹಿರಿಯರಿಗೆ ಗೌರವಯುತ ಜೀವನ ನಡೆಸಲು ಅನುವು ಮಾಡಿಕೊಡಲು ನಾವು ಬದ್ಧರಾಗಿದ್ದೇವೆಸಮಾಜಕ್ಕೆ ಕೊಡುಗೆ ನೀಡಿ ವೃತ್ತಿಯಿಂದ ನಿವೃತ್ತರಾಗಿರುವ ಹಿರಿಯ ಪತ್ರಕರ್ತರಿಗೆ ಪಿಂಚಣಿ ಸೌಲಭ್ಯ ಒದಗಿಸಲಾಗುತ್ತಿದ್ದುಇದರ ನಿಯಮಗಳುಪ್ರಕ್ರಿಯೆಗಳನ್ನು ಸರಳೀಕೃತಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಪಾಟೀಲ್‌ ತಿಳಿಸಿದರು.

ಹಿರಿಯ ಪತ್ರಕರ್ತರಿಗೂ ಯಶಸ್ವಿನಿ ಯೋಜನೆಯಡಿ ಸೌಲಭ್ಯಗಳನ್ನು ಪಡೆಯಲು ಅವಕಾಶ ಕಲ್ಪಿಸಲು ಕ್ರಮ ವಹಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದೂ ಅವರು ನುಡಿದರು.

ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ ಅಧ್ಯಕ್ಷತೆ ವಹಿಸಿದ್ದರುಜಯದೇವ ಸಂಸ್ಥೆಯ ನಿರ್ದೇಶಕ ಡಾ. ಬಿ. ದಿನೇಶ್‌ಹಿರಿಯ ಪತ್ರಕರ್ತರ ವೇದಿಕೆ ಅಧ್ಯಕ್ಷ ಆರ್‌.ಪಿ. ಸಾಂಬ ಸದಾಶಿವರೆಡ್ಡಿಹಿರಿಯ ಅಧಿಕಾರಿಗಳುಎಂ.ಎ. ಪೊನ್ನಪ್ಪವೆಂಕಟೇಶ್‌ ಪ್ರಸಾದ್‌, ಜಯದೇವ ಆಸ್ಪತ್ರೆಯ ಸಿಬ್ಬಂದಿ ಮತ್ತಿತರರು ಸಮಾರಂಭದಲ್ಲಿ ಹಾಜರಿದ್ದರು.

PARYAYA: ಹಿರಿಯ ಪತ್ರಕರ್ತರಿಗೆ ವೈದ್ಯಕೀಯ ಚಿಕಿತ್ಸೆಗೆ ಶೇ.75ರಷ್ಟು ...: ಹಿರಿಯ ಪತ್ರಕರ್ತರಿಗೆ ವೈದ್ಯಕೀಯ ಚಿಕಿತ್ಸೆಗೆ ಶೇ.75ರಷ್ಟು ರಿಯಾಯ್ತಿ ಬೆಂ ಗಳೂರು: ಹಿರಿಯ ಪತ್ರಕರ್ತರಿಗೆ ಸರ್ಕಾರದ ವೈದ್ಯಕೀಯ ಶಿಕ್ಷಣ ಇಲಾಖಾ ವ್ಯಾಪ್ತಿಯಲ್ಲಿ ಬರುವ ಎಲ...

Sunday, January 18, 2026

PARYAYA: ವಂಚಕರಿಗೇ ಚಳ್ಳೆಹಣ್ಣು ತಿನ್ನಿಸಿದ ಕಾನ್ಪುರದ 'ರಿಯಲ್ ಹೀರೋ'!

 ವಂಚಕರಿಗೇ ಚಳ್ಳೆಹಣ್ಣು ತಿನ್ನಿಸಿದ ಕಾನ್ಪುರದ 'ರಿಯಲ್ ಹೀರೋ'!

ವಂಚಿಸುವ ವಂಚಕರನ್ನೇ ವಂಚಿಸಿದ ಈ ರೋಚಕ ಕಥೆ ಹುಟ್ಟಿದ್ದು ಉತ್ತರ ಪ್ರದೇಶದ ಕಾನ್ಪುರದಲ್ಲಿ. ಇತ್ತೀಚೆಗೆ ಹೆಚ್ಚಾಗುತ್ತಿರುವ 'ಡಿಜಿಟಲ್ ಅರೆಸ್ಟ್' ನಂತಹ ಸೈಬರ್ ಅಪರಾಧಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಉತ್ತರ ಪ್ರದೇಶ ಪೊಲೀಸರು ೫ ನಿಮಿಷ ೨೬ ಸೆಕೆಂಡುಗಳ ಕಿರುಚಿತ್ರವನ್ನು ನಿರ್ಮಿಸಿದ್ದಾರೆ.

ಚಿತ್ರದ ವಿಶೇಷತೆಗಳು:

  • ಈ ಚಿತ್ರದಲ್ಲಿ ಖ್ಯಾತ ನಟ ನಾನಾ ಪಾಟೇಕರ್ ಒಬ್ಬ ನಿವೃತ್ತ ರೈಲ್ವೆ ಗಾರ್ಡ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
  • ಮುಂಬೈ ಪೊಲೀಸ್ ಇನ್ಸ್‌ಪೆಕ್ಟರ್ ಸೋಗಿನಲ್ಲಿ ಬರುವ ಸೈಬರ್ ವಂಚಕನೊಬ್ಬನಾನಾ ಪಾಟೇಕರ್ ಅವರಿಗೆ ಕರೆ ಮಾಡಿ FIR ದಾಖಲಿಸುವ ಬೆದರಿಕೆ ಹಾಕಿ ೧೫ ಲಕ್ಷ ರೂಪಾಯಿ ಬೇಡಿಕೆಯಿಡುತ್ತಾನೆ.
  • ಆದರೆ ನಾನಾ ಪಾಟೇಕರ್ಬಹಳ ಮುಗ್ದನಂತೆ ನಟಿಸುತ್ತಾ ಆ ವಂಚಕನಿಗೇ ದೊಡ್ಡ ಪಂಗನಾಮ ಹಾಕುತ್ತಾರೆ!

ಇದು ಕೇವಲ ಸಿನಿಮಾ ಕಥೆಯಲ್ಲನೈಜ ಘಟನೆ! 😲 ಸಿನಿಮಾದಲ್ಲಿ ನಾನಾ ಪಾಟೇಕರ್ ನಿರ್ವಹಿಸಿದ ಪಾತ್ರದ ಹಿಂದಿರುವುದು ಕಾನ್ಪುರದ ವಿಶ್ವ ಬ್ಯಾಂಕ್ ಬರ್ರಾ ನಿವಾಸಿ ಭೂಪೇಂದ್ರ ಸಿಂಗ್ ಎಂಬುವವರ ಸಾಹಸಗಾಥೆ. ಇದನ್ನು ನೋಡಲು ಕೆಳಗೆ ಕ್ಲಿಕ್‌ ಮಾಡಿ ಅಥವಾ ಯೂ ಟ್ಯೂಬ್‌ ಲಿಂಕ್‌ ಕ್ಲಿಕ್‌ ಮಾಡಿ: Video link: https://youtu.be/w5zx4r2scyA

ನಡೆದಿದ್ದೇನು? ಭೂಪೇಂದ್ರ ಅವರಿಗೂ ಒಮ್ಮೆ ಸೈಬರ್ ವಂಚಕನಿಂದ ಬೆದರಿಕೆ ಕರೆ ಬಂದಿತ್ತು. ಅದು ವಂಚಕನ ಕರೆ ಎಂದು ತಕ್ಷಣವೇ ಅರಿತ ಭೂಪೇಂದ್ರಕಿಂಚಿತ್ತೂ ಎದರದೆ ಅಪ್ಪಟ ನಾನಾ ಪಾಟೇಕರ್ ಶೈಲಿಯಲ್ಲಿ ಮಾತನಾಡತೊಡಗಿದರು. ತಾನೊಬ್ಬ ೧೬ ವರ್ಷದ ಹುಡುಗನೆಂದು ನಂಬಿಸಿಅದೇ ವಂಚಕನಿಂದ ತಮ್ಮ ಖಾತೆಗೆ ೧೦,೦೦೦ ರೂಪಾಯಿ ಜಮಾ ಮಾಡಿಸಿಕೊಂಡರು! ಹಣ ಕಳೆದುಕೊಂಡ ವಂಚಕಅದನ್ನು ಮರಳಿ ಪಡೆಯಲು ಹಲವು ದಿನಗಳ ಕಾಲ ಭೂಪೇಂದ್ರ ಅವರಿಗೆ ಕಾಡಿಬೇಡಿ ಕರೆ ಮಾಡುತ್ತಲೇ ಇದ್ದನಂತೆ.

ಭೂಪೇಂದ್ರ ಅವರ ಈ ಸಮಯಪ್ರಜ್ಞೆ ಮತ್ತು ಚಾಣಾಕ್ಷತನವನ್ನು ಮೆಚ್ಚಿಅಂದಿನ DGP ಪ್ರಶಾಂತ್ ಕುಮಾರ್ ಅವರು ಕಾನ್ಪುರದಲ್ಲಿ ನಡೆದ ಸಮಾರಂಭವೊಂದರಲ್ಲಿ ಅವರನ್ನು ಸನ್ಮಾನಿಸಿ ಗೌರವಿಸಿದರು.

ಗಮನಿಸಿ: ಸೈಬರ್ ವಂಚಕರ ಬಗ್ಗೆ ಎಚ್ಚರವಿರಲಿ. ನಾನಾ ಪಾಟೇಕರ್‌ ನಟಿಸಿದ ಈ ಅದ್ಭುತ ಕಿರುಚಿತ್ರ ಕೆಳಗಿದೆ. ನೀವೂ ಒಮ್ಮೆ ತಪ್ಪದೇ ವೀಕ್ಷಿಸಿ!

PARYAYA: ವಂಚಕರಿಗೇ ಚಳ್ಳೆಹಣ್ಣು ತಿನ್ನಿಸಿದ ಕಾನ್ಪುರದ 'ರಿಯಲ್ ಹೀರೋ'!:   ವಂಚಕರಿಗೇ ಚಳ್ಳೆಹಣ್ಣು ತಿನ್ನಿಸಿದ ಕಾನ್ಪುರದ ' ರಿಯಲ್ ಹೀರೋ '! ವಂ ಚಿಸುವ ವಂಚಕರನ್ನೇ ವಂಚಿಸಿದ ಈ ರೋಚಕ ಕಥೆ ಹುಟ್ಟಿದ್ದು ಉತ್ತರ ಪ್ರದೇಶದ ಕಾನ್ಪುರ ದಲ್...

Saturday, January 17, 2026

PARYAYA: ಜಕ್ಕೂರಿನಲ್ಲಿ ಸುಗ್ಗಿ ಹುಗ್ಗಿ: ಮಿಂಚಿದ ಯಕ್ಷಗಾನ

 ಜಕ್ಕೂರಿನಲ್ಲಿ ಸುಗ್ಗಿ ಹುಗ್ಗಿ: ಮಿಂಚಿದ ಯಕ್ಷಗಾನ

ಬೆಂಗಳೂರಿನ ಜಕ್ಕೂರು ಮೈದಾನದಲ್ಲಿ ಕಂದಾಯ ಸಚಿವ ಹಾಗೂ ಬ್ಯಾಟರಾಯನಪುರ ಕ್ಷೇತ್ರದ ಶಾಸಕ ಶ್ರೀ ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ ೨೦೨೬ ಜನವರಿ ೧೭ ಮತ್ತು ೧೮ರಂದು ಎರಡು ದಿನ ಸುಗ್ಗಿ ಹುಗ್ಗಿ ಸಂಕ್ರಾಂತಿ ಸಂಭ್ರಮ.

ವಿವಿಧ ಬಗೆಯ ಕ್ರೀಡೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ನೃತ್ಯ ನಾಟಕ, ಸ್ಪರ್ಧೆಗಳು, ಬಾಯಲ್ಲಿ ನೀರೂರಿಸುವ ಬಗೆ ಬಗೆಯ ತಿಂಡಿ ತಿನಸುಗಳು, ಉಡುಪುಗಳ ಮೇಳ.

೨೦೨೬ರ  ಜನವರಿ ೧೭ರಂದು ವಿವಿಧ ಬಗೆ ನೃತ್ಯ ಸ್ಪರ್ಧೆಗಳಲ್ಲಿ ನಾಗವಾರ ಆಸುಪಾಸಿನ ಮಕ್ಕಳ ತಂಡ- ʼಭೈರವʼ ನೃತ್ಯ ತಂಡವು ಕರಾವಳಿಯ ಹೆಮ್ಮೆಯ ಕಲೆ ಯಕ್ಷಗಾನದ ತುಣುಕೊಂದನ್ನು ಪ್ರದರ್ಶಿಸಿತು. ಯಕ್ಷ ಕಲಾ ಕೌಸ್ತುಭದ ಯಕ್ಷಗಾನ ಗುರು ಉಮೇಶ್‌ ರಾಜ್‌ ಅವರಿಗೆ ಮಾರ್ಗದರ್ಶನ ಮಾಡಿದರು.

ಯಕ್ಷಗಾನದ ವಿಡಿಯೋ ಇಲ್ಲಿದೆ. ಕೆಳಗಿನ ಚಿತ್ರ ಕ್ಲಿಕ್‌ ಮಾಡಿ ಅಥವಾ ಯೂ ಟ್ಯೂಬ್‌ ವಿಡಿಯೋ ಲಿಂಕ್‌ ಕ್ಲಿಕ್‌ ಮಾಡಿ: https://youtu.be/yDx_oeGV4aM







PARYAYA: ಜಕ್ಕೂರಿನಲ್ಲಿ ಸುಗ್ಗಿ ಹುಗ್ಗಿ: ಮಿಂಚಿದ ಯಕ್ಷಗಾನ:   ಜಕ್ಕೂರಿನಲ್ಲಿ ಸುಗ್ಗಿ ಹುಗ್ಗಿ: ಮಿಂಚಿದ ಯಕ್ಷಗಾನ ಬೆಂ ಗಳೂರಿನ ಜಕ್ಕೂರು ಮೈದಾನದಲ್ಲಿ ಕಂದಾಯ ಸಚಿವ ಹಾಗೂ ಬ್ಯಾಟರಾಯನಪುರ ಕ್ಷೇತ್ರದ ಶಾಸಕ ಶ್ರೀ ಕೃಷ್ಣ ಬೈರೇಗೌಡ ಅವರ...