Thursday, June 5, 2025

PARYAYA: ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-6

 ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-6

ಪಾರ್ಥನು ಮತ್ತೊಮ್ಮೆ ನಿರ್ಮಿಸಿದ ಬಾಣಗಳ ಸೇತುವೆಯನ್ನು ಮುರಿದೇ ಬಿಡುತ್ತೇನೆ ಎಂಬ ಅತ್ಯುತ್ಸಾಹದೊಂದಿಗೆ ನೆಗೆದ ಹನುಮಂತ ತನ್ನ ಯತ್ನದಲ್ಲಿ ಸೋತು ಬಿಡುತ್ತಾನೆ. ಪರಮ ರಾಮಭಕ್ತನಿಗೆ ಎಂತಹ ಸೋಲಾಯಿತು ಎಂದು ಮರುಗುತ್ತಾನೆ. ತನ್ನ ರಾಮಭಕ್ತಿಗೆ ಚ್ಯುತಿ ಬಂತಲ್ಲ ಎಂದು ಪರಿ ಪರಿಯಾಗಿ ಪ್ರಲಾಪಿಸುತ್ತಾನೆ. ಇದನ್ನೆಲ್ಲ ನೋಡುತ್ತಲೇ ಇದ್ದ ವೃದ್ಧ ತನ್ನಷ್ಟಕ್ಕೇ ಒಂದು ತೀರ್ಮಾನಕ್ಕೆ ಬರುತ್ತಾನೆ. ಆಗ, ಹನುಮ, ಪಾರ್ಥನ ಎದುರು ಅದ್ಭುತ ಘಟನೆಯೊಂದು ನಡೆಯುತ್ತದೆ. ಏನದು ಆ ಅದ್ಭುತ ಘಟನೆ?

ಕೆಳಗಿನ ಚಿತ್ರ ಕ್ಲಿಕ್‌ ಮಾಡಿ ವಿಡಿಯೋ ನೋಡಿ ಅಥವಾ  ʼಯಕ್ಷಗಾನ/ ತಾಳಮದ್ದಳೆ ʼ ಪುಟ ಕ್ಲಿಕ್‌ ಮಾಡಿ ಪೂರ್ತಿ ಕಥೆ ನೋಡಿ.

 ಕೆಳಗಿನವುಗಳನ್ನೂ ಓದಿರಿ:

ಕೊರೋನಾದಿಂದ ರಕ್ಷಣೆ ಹೇಗಣ್ಣಇಲ್ಲಿದೆ ಜಾಗೃತಿ ಯಕ್ಷಗಾನ

'ಅಕ್ಕಅಂಗಳದಲ್ಲಿ 'ಯಕ್ಷವೈಭವ...! Yaksha Vaibhava in Akka Conference...!

ಬಲಿಪರು ಇನ್ನು ದಂತಕಥೆ ಮಾತ್ರ.

ವಿನೂತನ ಯಕ್ಷಗಾನ ಪ್ರದರ್ಶನ ʼಹರಿದರುಶನ-ಏಕವ್ಯಕ್ತಿ ನವರೂಪಂ

ಕ್ಷಮಿಸಿ ಪಂಜಾಜೆ ನಿಮ್ಮ ಮನೆಗೆ ಬರಲಾಗಲಿಲ್ಲ..

ಶ್ರೀರಾಮ ದರ್ಶನತಾಳಮದ್ದಳೆ ಭಾಗ-

ಶ್ರೀರಾಮ ದರ್ಶನತಾಳಮದ್ದಳೆ ಭಾಗ-

ಶ್ರೀರಾಮ ದರ್ಶನತಾಳಮದ್ದಳೆ ಭಾಗ-

ಶ್ರೀರಾಮ ದರ್ಶನತಾಳಮದ್ದಳೆ ಭಾಗ-4

ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-5

PARYAYA: ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-6:   ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-6 ಪಾ ರ್ಥನು ಮತ್ತೊಮ್ಮೆ ನಿರ್ಮಿಸಿದ ಬಾಣಗಳ ಸೇತುವೆಯನ್ನು ಮುರಿದೇ ಬಿಡುತ್ತೇನೆ ಎಂಬ ಅತ್ಯುತ್ಸಾಹದೊಂದಿಗೆ ನೆಗೆದ ಹನುಮಂತ ತನ್ನ ಯತ...

Wednesday, June 4, 2025

PARYAYA: ಆರ್‌ಸಿಬಿ ವಿಜಯೋತ್ಸವ, ಮಹಾದುರಂತ: ೧೧ ಜನರ ಸಾವು

 ಆರ್‌ಸಿಬಿ ವಿಜಯೋತ್ಸವ, ಮಹಾದುರಂತ: ೧೧ ಜನರ ಸಾವು

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ೨೦೨೫ ಜೂನ್‌ ೪ರ ಬುಧವಾರ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿದೆ. ಇಲ್ಲಿ ಕಾಲ್ತುಳಿತಕ್ಕೆ ಒಳಗಾಗಿ 11ಜನರು ಮೃತರಾಗಿ, 47 ಮಂದಿ ಗಾಯಗೊಂಡಿದ್ದಾರೆ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ ಸಿಬಿ) ತಂಡವು ಜೂನ್‌ ೩ರಂದು ನಡೆದ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟ್ವೆಂಟಿ-೨೦ ಪಂದ್ಯದಲ್ಲಿ ೧೭ ವರ್ಷಗಳ ಬಳಿಕ ಗೆದ್ದ ಹಿನ್ನೆಲೆಯಲ್ಲಿ ಕ್ರಿಕೆಟ್‌ ಅಸೋಸಿಯೇಷನ್‌ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡದ್ದ ವಿಜಯೋತ್ಸವ ಸಂದರ್ಭದಲ್ಲಿ ಈ ಕಾಲ್ತುಳಿತದ ದುರಂತ ಘಟಿಸಿದೆ.

ʼನಿರೀಕ್ಷೆ ಮೀರಿದ ಜನಸಂದಣಿಯ ಕಾರಣದಿಂದ ಈ ದುರಂತ ಸಂಭವಿಸಿದೆʼ ಎಂದು ಬೌರಿಂಗ್ ಆಸ್ಪತ್ರೆವೈದೇಹಿ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ʼಗಾಯಾಳುಗಳ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದೇನೆತಮ್ಮವರನ್ನು ಕಳೆದುಕೊಂಡವರನ್ನು ಸಂತೈಸಿದ್ದೇನೆ. ಸಂಭ್ರಮಾಚರಣೆ ಮಾಡುವಾಗ ಇಂತಹ ದುರಂತ ನಡೆಯಬಾರದಾಗಿತ್ತು. ಈ ಘಟನೆಯ ಬಗ್ಗೆ ನಮಗೆ ಮರುಕವಿದೆ.ʼ ಎಂದು ಅವರು ಹೇಳಿದ್ದಾರೆ.

ಸಾವಿಗೀಡಾದವರಲ್ಲಿ ಹೆಚ್ಚಿನವರು ಯುವ ವಯಸ್ಸಿನವರು. ನಾವು ಮೃತಪಟ್ಟವರ ಕುಟುಂಬದವರಿಗೆ ರೂ.10 ಲಕ್ಷ ಪರಿಹಾರ ನೀಡಲಿದ್ದೇವೆ. ಗಾಯಗೊಂಡವರ ಚಿಕಿತ್ಸೆ ವೆಚ್ಚವನ್ನು ಸರ್ಕಾರ ಭರಿಸಲಿದೆ. ಗಾಯಗೊಂಡವರು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಈ ದುರಂತದ ಬಗ್ಗೆ ಮ್ಯಾಜಿಸ್ಟ್ರೀಯಲ್ ತನಿಖೆಗೆ ಆದೇಶಿಸಿದ್ದೇನೆ. ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು. 15ದಿನಗಳ ಒಳಗಾಗಿ ತನಿಖೆಯ ವರದಿಯನ್ನು ಸಲ್ಲಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಮಂಗಳವಾರ ತಡರಾತ್ರಿವರೆಗೂ ಐಪಿಎಲ್ ಫೈನಲ್ ಪಂದ್ಯ ನಡೆದಿತ್ತು. ಕ್ರಿಕೆಟ್ ಅಸೋಸಿಯೇಶನ್ ಅವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಸರ್ಕಾರದ ವತಿಯಿಂದ ವಿಧಾನಸೌಧದ ಬಳಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ನಮ್ಮ ನಿರೀಕ್ಷೆಗೂ ಮೀರಿ ಜನಅಭಿಮಾನಿಗಳು ಸೇರಿದ್ದರು. ವಿಧಾನಸೌಧ ಎದುರು ಸುಮಾರು 1ಲಕ್ಷಕ್ಕೂ ಹೆಚ್ಚು ಜನ ಸೇರಿದ್ದರು. ಆದರೂ ಸರ್ಕಾರ ಆಯೋಜಿಸಿದ್ದ ಸಮಾರಂಭದಲ್ಲಿ ಯಾವುದೇ ಅನಿರೀಕ್ಷಿತ ಘಟನೆಗಳುದುರಂತ ನಡೆದಿಲ್ಲ.

ಆದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದುರಂತ ಸಂಭವಿಸಿದೆ. ಯಾರೂ ಇದನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಕ್ರಿಕೆಟ್ ಅಸೋಸಿಯೇಶನ್ ಅಥವಾ ನಾವು ನಿರೀಕ್ಷಿಸಿರಲಿಲ್ಲ. ಕ್ರಿಕೆಟ್ ಸ್ಟೇಡಿಯಂನಲ್ಲಿ 35 ಸಾವಿರ ಜನರು ಕುಳಿತುಕೊಳ್ಳುವ ಆಸನ ವ್ಯವಸ್ಥೆಯಿದೆ. ಆದರೆ 2-3 ಲಕ್ಷ ಜನರು ಆಗಮಿಸಿದ್ದಾರೆ. ಇಷ್ಟೊಂದು ಪ್ರಮಾಣದಲ್ಲಿ ಜನರು ಬರುವ ನಿರೀಕ್ಷೆ ಮಾಡಿರಲಿಲ್ಲ. ಸ್ಟೇಡಿಯಂ ಸಾಮರ್ಥ್ಯದಷ್ಟು ಜನರ ನಿರೀಕ್ಷೆಯಿತ್ತು. ಕ್ರಿಕೆಟ್ ಅಸೋಸಿಯೇಷನ್ ನಡೆಸುವ ಕಾರ್ಯಕ್ರಮಗಳಿಗೆ ಭದ್ರತೆ ಒದಗಿಸುವ ಕೆಲಸ ಸರ್ಕಾರ ಮಾಡುತ್ತದೆಯಷ್ಟೇ ಎಂದು ಸಿದ್ಧರಾಮಯ್ಯ ನುಡಿದರು.

PARYAYA: ಆರ್‌ಸಿಬಿ ವಿಜಯೋತ್ಸವ, ಮಹಾದುರಂತ: ೧೧ ಜನರ ಸಾವು:   ಆರ್‌ಸಿಬಿ ವಿಜಯೋತ್ಸವ, ಮಹಾದುರಂತ: ೧೧ ಜನರ ಸಾವು ಬೆಂ ಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ೨೦೨೫ ಜೂನ್‌ ೪ರ ಬುಧವಾರ ಐಪಿಎಲ್ ವಿಜಯೋತ್ಸವ ಸಂದರ್ಭದಲ್...

Monday, June 2, 2025

PARYAYA: ಬಣ್ಣ ಬದಲಿಸುವಾಗ ಸಿಕ್ಕಿಹಾಕಿಕೊಂಡ ಓತಿಕ್ಯಾತ..!

 ಬಣ್ಣ ಬದಲಿಸುವಾಗ ಸಿಕ್ಕಿಹಾಕಿಕೊಂಡ ಓತಿಕ್ಯಾತ..!

ತಿಕ್ಯಾತ ಬಣ್ಣ ಬದಲಿಸುತ್ತದೆ ಎಂಬುದು ಬಹಳ ಜನಕ್ಕೆ ಗೊತ್ತು. ಆದರೆ ಹಾಗೆ ಬಣ್ಣ ಬದಲಿಸುವಾಗ ಕಾಣ ಸಿಗುವುದು ಬಲು ಅಪರೂಪ. ಸಿಕ್ಕಿದರೂ ಅದನ್ನೆಲ್ಲ ನೋಡುವಷ್ಟು ಹೊತ್ತು ಅದೇನು ಫೋಸ್‌ ನೀಡುತ್ತಾ ನಿಲ್ಲುತ್ತದೆಯೇ?

ಮನುಷ್ಯರ ಕಾಲಿನ ಸಪ್ಪಳ ಕೇಳುವಷ್ಟರಲ್ಲೇ ಅದು ಸ್ಥಳದಿಂದ ಪರಾರಿ ಆಗಿ ಬಿಡುತ್ತದೆ.

ಅಂತಹ ಓತಿಕ್ಯಾತ ಬಣ್ಣ ಬದಲಿಸುತ್ತಾ ವರ್ಣಮಯ ರೂಪದಲ್ಲಿ ನಿಂತು ಫೋಸ್‌ ಕೊಟ್ಟು ಬಿಟ್ಟಿದೆ ನೋಡಿ- ನಮ್ಮ ಹಿರಿಯ ಪತ್ರಿಕಾ ಛಾಯಾಗ್ರಾಹಕ ವಿಶ್ವನಾಥ ಸುವರ್ಣರಿಗೆ.

ನಮ್ಮ ಕರ್ನಾಟಕದ ಮಧ್ಯಭಾಗದಲ್ಲಿ ಇರುವ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ವನ್ಯಜೀವಿ ಅಭಯಾರಣ್ಯಕ್ಕೆ ನೆಲೆ. ರಾಣಿಬೆನ್ನೂರು ಕೃಷ್ಣಮೃಗ ಅಭಯಾರಣ್ಯದಲ್ಲಿ ಕೃಷ್ಣಮೃಗಗ್ರೇಟ್ ಇಂಡಿಯನ್ ಬಸ್ಟರ್ಡ್ ಮತ್ತು ತೋಳಗಳು ಸಾಕಷ್ಟವೆ. ಆದರೆ ಇಲ್ಲಿದ್ದ ಗ್ರೇಟ್ ಇಂಡಿಯನ್ ಬಸ್ಟರ್ಡ್ ಹಕ್ಕಿ ಈಗ ಬಹುತೇಕ ಅಳಿದು ಹೋದಂತಿದೆ. ಕೊನೆಯ ಬಾರಿಗೆ 2005 ರಲ್ಲಿ ಈ ಪಕ್ಷಿ ಕಾಣಿಸಿಕೊಂಡಿತ್ತು. ಆ ನಂತರ ಈ ಯಾರಿಗೂ ಕಂಡದ್ದಿಲ್ಲವಂತೆ.

ವಿಶ್ವನಾಥ ಸುವರ್ಣ ಇತ್ತೀಚಿನ ದಿನಗಳಲ್ಲಿ ಅಳಿಯುತ್ತಿರುವ ಚಿಕ್ಕಪುಟ್ಟ ಪ್ರಾಣಿಗಳು, ಪಕ್ಷಿಗಳ ಹುಡುಕಾಟದಲ್ಲಿದ್ದಾರೆ. ಅವುಗಳನ್ನು ಸೆರೆ ಹಿಡಿದು (ಕ್ಯಾಮರಾದಲ್ಲಿ ಮಾರಾಯರೆ) ಜನರಿಗೆ ತೋರಿಸಬೇಕೆಂಬ ತವಕದಲ್ಲಿ ಇದ್ದಾರೆ. ಹೀಗಾಗಿ ತಮ್ಮ ಕ್ಯಾಮರಾ ಹಿಡಿದುಕೊಂಡು ಊರೂರು ಸುತ್ತುತ್ತಿದ್ದಾರೆ.

ಇತ್ತೀಚೆಗೆ ಅವರು ಹಾವೇರಿ ಜಿಲ್ಲೆಯ ರಾಣೆ ಬೆನ್ನೂರಿಗೆ ಭೇಟಿ ಕೊಟ್ಟಿದ್ದರು. ಹಾಗೆಯೇ ಹೆಗಲಿಗೆ ಕ್ಯಾಮರಾ ಏರಿಸಿಕೊಂಡು ಸುತ್ತಾಡುತ್ತಿದ್ದಾಗ, ಹೊಲ ಒಂದರಲ್ಲಿ ಬಣ್ಣ ಬದಲಿಸುತ್ತಿದ್ದ ಓತಿ ಕ್ಯಾತ ಇವರ ಕ್ಯಾಮರಾಕ್ಕೆ ಫೋಸ್‌ ಕೊಟ್ಟೇ ಬಿಟ್ಟಿತು.

ಆ ಓತಿಕ್ಯಾತನ ಚಿತ್ರಗಳು ಇಲ್ಲಿವೆ ನೋಡಿ.

ಇದೇ ಸಮಯದಲ್ಲಿ ಸುವರ್ಣರಿಗೆ ಅಪರೂಪದ ಪಕ್ಷಿಯಾದ ಫ್ಲೈ ಕ್ಯಾಚರ್‌ ಹಕ್ಕಿಯೂ ಕಾಣ ಸಿಕ್ಕಿತು. ಫ್ಲೈ ಕ್ಯಾಚರ್‌ ಪಕ್ಷಿಗಳನ್ನು ʼಇಂಡಿಯನ್‌ ಪ್ಯಾರಡೈಸ್‌ ಫ್ಲೈ ಕ್ಯಾಚರ್‌ʼ ಎಂಬುದಾಗಿಯೂ ಕರೆಯುತ್ತಾರೆ.

ಅತ್ಯಂತ ಆಕರ್ಷಕವಾದ ಈ ಪಕ್ಷಿ ಜಾತಿಯ ಗಂಡು ಹಕ್ಕಿಗಳು ಉದ್ದವಾದ ರಿಬ್ಬನ್‌ ಮಾದರಿಯ ಬಾಲ ಹೊಂದಿರುತ್ತವೆ. ಗಂಡು ಹಕ್ಕಿಗಳು ದಾಲ್ಚಿನ್ನಿ ಮತ್ತು ಬಿಳಿ ಎರಡು ಬಣ್ಣಗಳಲ್ಲಿ ಇರುತ್ತವೆ. ಎರಡೂ ಬಣ್ಣದ ಹಕ್ಕಿಗಳು ಕಣ್ಣಿನ ಸುತ್ತಲೂ ನೀಲಿ ಉಂಗುರವನ್ನು ಹೊಂದಿರುತ್ತವೆ. ಕಪ್ಪುಬಣ್ಣದ ಹೊಳಪುಳ್ಳ ತಲೆಯನ್ನು ಹೊಂದಿರುತ್ತವೆ. ಆದರೆ ಬಿಳಿ ಹಕ್ಕಿ ಕೆಳಗೆ ಸಂಪೂರ್ಣವಾಗಿ ಬೆಳ್ಳಗಿರುತ್ತದೆ. ದಾಲ್ಚಿನ್ನಿ ಹಕ್ಕಿ ದಾಲ್ಚಿನ್ನಿ ಮೇಲ್ಭಾಗ ಮತ್ತು ಬಾಲ ಮತ್ತು ಮಾಸಿದ ಬಿಳಿಬಣ್ಣದ  ಒಳಭಾಗವನ್ನು ಹೊಂದಿರುತ್ತದೆ.

ಹೆಣ್ಣು ಹಕ್ಕಿಗಳು ಬೂದು ಬಣ್ಣದ ಗಂಟಲುಚಿಕ್ಕ ಬಾಲವನ್ನು ಹೊಂದಿರುತ್ತವೆ. ಬಾಲದ ಮೇಲ್ಭಾಗದಲ್ಲಿ ದಾಲ್ಚಿನ್ನಿ ಬಣ್ಣವಿರುತ್ತದೆ. ಹೆಣ್ಣು ಹಕ್ಕಿಯು ಗಂಡು ಹಕ್ಕಿಯಂತೆ ನೀಲಿ ಕಣ್ಣುರೆಪ್ಪೆಯನ್ನು ಹೊಂದಿರುವುದಿಲ್ಲ.

ಈ ಹಕ್ಕಿಗಳು ಕೀಟಗಳ ಮೇಲೆ ಸಣ್ಣ ವಿಮಾನದಂತೆ ಎರಗುತ್ತವೆ. ಕೀಟಗಳನ್ನು ಹಿಡಿಯಲು ಸಾಂದರ್ಭಿಕವಾಗಿ ನೆಲಕ್ಕೆ ಇಳಿಯುತ್ತವೆ. ಮುಖ್ಯವಾಗಿ ಕಾಡಿನ ಆವಾಸಸ್ಥಾನಗಳಲ್ಲಿ ಇವು ಕಂಡು ಕಂಡುಬರುತ್ತವೆ.

ಅಪರೂಪದ ಈ ಕ್ಯಾಚ್‌ ಫ್ಲೈಯರ್‌ ಹಕ್ಕಿ ತನ್ನ ಮರಿಗಳಿಗೆ ಆಹಾರ ನೀಡುತ್ತಿದ್ದಾಗ ಸುವರ್ಣರ ಕ್ಯಾಮರಾದಲ್ಲಿ ಸೆರೆಯಾಗಿ ಬಿಟ್ಟದ್ದನ್ನು ಇಲ್ಲಿ ನೋಡಬಹುದು.


ಚಿತ್ರಗಳ ಸಮೀಪ ನೋಟಕ್ಕೆ ಅವುಗಳನ್ನು ಕ್ಲಿಕ್‌ ಮಾಡಿ.




ನೆತ್ರಕೆರೆ ಉದಯಶಂಕರ

ಸುವರ್ಣ ನೋಟದ ಇತರ ಕಂತುಗಳಿಗೆ ಕೆಳಗೆ 👇ಕ್ಲಿಕ್‌ ಮಾಡಿ


PARYAYA: ಬಣ್ಣ ಬದಲಿಸುವಾಗ ಸಿಕ್ಕಿಹಾಕಿಕೊಂಡ ಓತಿಕ್ಯಾತ..!:   ಬಣ್ಣ ಬದಲಿಸುವಾಗ ಸಿಕ್ಕಿಹಾಕಿಕೊಂಡ ಓತಿಕ್ಯಾತ..! ಓ ತಿಕ್ಯಾತ ಬಣ್ಣ ಬದಲಿಸುತ್ತದೆ ಎಂಬುದು ಬಹಳ ಜನಕ್ಕೆ ಗೊತ್ತು. ಆದರೆ ಹಾಗೆ ಬಣ್ಣ ಬದಲಿಸುವಾಗ ಕಾಣ ಸಿಗುವುದು ಬಲು ಅ...

Saturday, May 31, 2025

PARYAYA: ಭಾರತದ ‘ಹುಲಿ ಸಂರಕ್ಷಕ’ ವಾಲ್ಮೀಕ್ ಥಾಪರ್ ಇನ್ನಿಲ್ಲ

 ಭಾರತದ ‘ಹುಲಿ ಸಂರಕ್ಷಕ’ ವಾಲ್ಮೀಕ್ ಥಾಪರ್ ಇನ್ನಿಲ್ಲ

ವದೆಹಲಿ: ಭಾರತದ ಖ್ಯಾತ ʼಹುಲಿ ಸಂರಕ್ಷಕʼ ಮತ್ತು ಲೇಖಕ ವಾಲ್ಮೀಕ್ ಥಾಪರ್ ಅವರು 2025 ಮೇ 31ರ ಶನಿವಾರ ಬೆಳಗ್ಗೆ ದೆಹಲಿಯಲ್ಲಿ ನಿಧನರಾದರು. 1970 ರ ದಶಕದ ಮಧ್ಯಭಾಗದಿಂದ ಭಾರತದಲ್ಲಿ ಹುಲಿ ಸಂರಕ್ಷಣೆಯಲ್ಲಿ ಅವರು ಮುಂಚೂಣಿಯಲ್ಲಿದ್ದರುಕೇಂದ್ರ ಮತ್ತು ರಾಜ್ಯ ಸರ್ಕಾರಗಳ 150 ಕ್ಕೂ ಹೆಚ್ಚು ಸಮಿತಿಗಳಲ್ಲಿ ಸೇವೆ ಸಲ್ಲಿಸಿದ್ದರು.
ಆಫ್ರಿಕಾದ ಕುರಿತು ನಾಲ್ಕು ಪುಸ್ತಕಗಳನ್ನು ಒಳಗೊಂಡಂತೆ 32 ಪುಸ್ತಕಗಳನ್ನು ಥಾಪರ್ ಬರೆದಿದ್ದಾರೆ. 'ಲಿವಿಂಗ್ ವಿತ್ ಟೈಗರ್ಸ್', 'ದಿ ಸೀಕ್ರೆಟ್ ಲೈಫ್ ಆಫ್ ಟೈಗರ್ಸ್ಅವುಗಳಲ್ಲಿ ಸೇರಿವೆ.
ಅವರ ಪ್ರಭಾವ ವ್ಯಾಪಕವಾಗಿತ್ತುಅವರು ರಾಜಸ್ಥಾನದಲ್ಲಿ ರಾಜ್ಯ ಸರ್ಕಾರದೊಂದಿಗೆ ಬಹುತೇಕ ಪ್ರತ್ಯೇಕವಾಗಿ ಕೆಲಸ ಮಾಡಿದರೂಮಹಾರಾಷ್ಟ್ರದ ಪ್ರೀತಿಯ ತಡೋಬಾ-ಅಂಧಾರಿ ಟೈಗರ್ ರಿಸರ್ವ್‌ನಂತಹ ಇತರ ಉದ್ಯಾನವನಗಳ ಪುನರುಜ್ಜೀವನದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು” ಎಂದು ಸ್ಯಾಂಕ್ಚುರಿ ನೇಚರ್ ಫೌಂಡೇಶನ್ ತಿಳಿಸಿದೆ.
"ಎಲ್ಲಾ ಪ್ರವಾಸೋದ್ಯಮವೂ ಕೆಟ್ಟ ಪ್ರವಾಸೋದ್ಯಮ ಎಂಬ ಮೂಢನಂಬಿಕೆಯ ದೃಷ್ಟಿಕೋನವನ್ನು ಥಾಪರ್ ತ್ಯಜಿಸಿದ್ದರು ಮತ್ತು ಉದ್ಯಾನವನಗಳು ಮತ್ತು ಜನರಿಗೆ ಪ್ರಯೋಜನವನ್ನು ನೀಡುವ ನವೀನ ಪ್ರವಾಸೋದ್ಯಮದ ಪ್ರಮುಖ ಪ್ರತಿಪಾದಕರಾಗಿದ್ದರು. ವಿಜ್ಞಾನಿಗಳುಕಾರ್ಯಕರ್ತರುಗ್ರಾಮ ಮುಖಂಡರುಅರಣ್ಯ ಅಧಿಕಾರಿಗಳುಅಧಿಕಾರಿಗಳುರಾಜಕಾರಣಿಗಳು ಮತ್ತು ಮುಕ್ತ ಪತ್ರಿಕಾ ಸೇರಿದಂತೆ ಸಮಾನ ಮನಸ್ಸಿನ ಜನರ ವಿವಿಧ ವಲಯಗಳ ಗುಂಪನ್ನು ಒಟ್ಟುಗೂಡಿಸುವ ಮೂಲಕ ಮಾತ್ರ ಇದೆಲ್ಲವೂ ಸಾಧ್ಯ ಎಂದು ಅವರು ದೃಢವಾಗಿ ನಂಬಿದ್ದರು" ಎಂದು ಫೌಂಡೇಶನ್ ಹೇಳಿದೆ.
ಅವರು ದೂರದರ್ಶನಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ನಿರ್ಮಿಸಿದ್ದರು. ಭಾರತದ ಅತ್ಯಂತ ಗೌರವಾನ್ವಿತ ವನ್ಯಜೀವಿ ತಜ್ಞರು ಮತ್ತು ಸಂರಕ್ಷಣಾವಾದಿಗಳಲ್ಲಿ ಥಾಪರ್‌ ಒಬ್ಬರಾಗಿದ್ದರು. ಅವರು  ಬಿಬಿಸಿಅನಿಮಲ್ ಪ್ಲಾನೆಟ್ಡಿಸ್ಕವರಿ ಮತ್ತು ನ್ಯಾಷನಲ್ ಜಿಯಾಗ್ರಫಿಕ್‌ನಂತಹ ಮಾಧ್ಯಮಗಳಿಗೆ ಭಾರತದ ನೈಸರ್ಗಿಕ ಆವಾಸಸ್ಥಾನದ ಕುರಿತು ಸಾಕ್ಷ್ಯಚಿತ್ರಗಳನ್ನು ನಿರ್ಮಿಸಿ ನಿರೂಪಣೆ ಮಾಡಿದ್ದಾರೆ.
ವಾಲ್ಮೀಕ್ ಥಾಪರ್ ಬಾಂಬೆಯಲ್ಲಿ (ಈಗಿನ ಮುಂಬೈ) 1959 ರಲ್ಲಿ ʼಸೆಮಿನಾರ್ʼ ರಾಜಕೀಯ ಜರ್ನಲ್ ಸ್ಥಾಪಿಸಿದ್ದ ರೊಮೇಶ್ ಥಾಪರ್- ರಾಜ್ ದಂಪತಿಗೆ 1952ರಲ್ಲಿ ಜನಿಸಿದರು. ಪ್ರಸಿದ್ಧ ಭಾರತೀಯ ಇತಿಹಾಸಕಾರರಾದ ರೋಮಿಲಾ ಥಾಪರ್ ಅವರ ಚಿಕ್ಕಮ್ಮ.
ಅವರು ರಂಗಭೂಮಿ ಹಾಗೂ ಚಿತ್ರ ನಟಿ ಸಂಜನಾ ಕಪೂರ್ ಅವರನ್ನು ವಿವಾಹವಾದರು. ದಂಪತಿಗೆ ಹಮೀರ್ ಎಂಬ ಮಗನಿದ್ದಾನೆ. ಅವರು ದೆಹಲಿಯಲ್ಲಿ ವಾಸಿಸುತ್ತಿದ್ದಾರೆ.
ಫತೇಹ್ ಸಿಂಗ್ ರಾಥೋಡ್ ಅವರಿಂದ ವಾಲ್ಮೀಕ್ ಥಾಪರ್ ಪ್ರಭಾವಿತರಾಗಿದ್ದರು.
ರಣಥಂಬೋರ್ ಪ್ರತಿಷ್ಠಾನದ ಅವರ ಉಸ್ತುವಾರಿಯನ್ನು ಗುರುತಿಸಿ, 2005 ರಲ್ಲಿ ಟೈಗರ್ ಟಾಸ್ಕ್ ಫೋರ್ಸ್‌ನ ಸದಸ್ಯರನ್ನಾಗಿ ಭಾರತ ಸರ್ಕಾರ ನೇಮಿಸಿತು. ಟಾಸ್ಕ್‌ ಫೋರ್ಸ್‌ ನೀಡಿದ ಬಹುಮತದ ತೀರ್ಪಿಗೆ ವಿರುದ್ಧವಾಗಿ ಅವರು ತಮ್ಮ ಭಿನ್ನಮತದ ಟಿಪ್ಪಣಿಯನ್ನು ಬರೆದಿದ್ದರು. ಬಳಿಕ 1973ರಲ್ಲಿ ಭಾರತ ಸರ್ಕಾರ ರಚಿಸಿದ್ದ ಪ್ರಾಜೆಕ್ಟ್‌ ಟೈಗರ್‌ ವಿಫಲಗೊಂಡದ್ದೇಕೆ ಎಂದು ವಿಶ್ಲೇಷಿಸುವ ಮೂಲಕ ಅವರು ಗಮನ ಸೆಳೆದಿದ್ದರು.
'ಮ್ಯಾಚ್ಲಿಎಂಬ ಹೆಣ್ಣು ಹುಲಿಯೊಂದಿಗಿನ ಅವರ ಪ್ರಸಿದ್ಧ ಒಡನಾಟವು ಹಲವಡೆ ದಾಖಲಾಗಿದೆ. ಥಾಪರ್ ಅವರ ಅತ್ಯಂತ ಪ್ರೀತಿಯ ಹುಲಿಗಳನ್ನು ಬಿಬಿಸಿ ಸಾಕ್ಷ್ಯಚಿತ್ರ ʼಮೈ ಟೈಗರ್ ಫ್ಯಾಮಿಲಿʼ 👇ಎತ್ತಿ ತೋರಿಸಿತ್ತು.


ಕೆಳಗಿನದನ್ನೂ ಕ್ಲಿಕ್‌ ಮಾಡಿ ನೋಡಿರಿ


PARYAYA: ಭಾರತದ ‘ಹುಲಿ ಸಂರಕ್ಷಕ’ ವಾಲ್ಮೀಕ್ ಥಾಪರ್ ಇನ್ನಿಲ್ಲ:   ಭಾರತದ ‘ಹುಲಿ ಸಂರಕ್ಷಕ’ ವಾಲ್ಮೀಕ್ ಥಾಪರ್ ಇನ್ನಿಲ್ಲ ನ ವದೆಹಲಿ: ಭಾರತದ ಖ್ಯಾತ ʼ ಹುಲಿ ಸಂರಕ್ಷಕ ʼ ಮತ್ತು ಲೇಖಕ ವಾಲ್ಮೀಕ್ ಥಾಪರ್ ಅವರು 2025 ಮೇ 31ರ ಶನಿವಾರ ಬೆಳ...

Thursday, May 29, 2025

PARYAYA: ಬ್ರಹ್ಮೋಸ್‌ ದಾಳಿ: ಕಡೆಗೂ ಒಪ್ಪಿಕೊಂಡ ಪಾಕ್‌ ಪ್ರಧಾನಿ

 ಬ್ರಹ್ಮೋಸ್‌ ದಾಳಿ: ಕಡೆಗೂ ಒಪ್ಪಿಕೊಂಡ ಪಾಕ್‌ ಪ್ರಧಾನಿ

ವದೆಹಲಿ: ಭಾರತವು ಪಾಕಿಸ್ತಾನದ ಮೇಲೆ ಬ್ರಹೋಸ್‌ ಕ್ಷಿಪಣಿ ದಾಳಿ ನಡೆಸಿದ್ದು ನಿಜ ಎಂಬುದಾಗಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌ ಕಡೆಗೂ ಒಪ್ಪಿಕೊಂಡಿದ್ದಾರೆ.
ಅಜೆರ್ಬೈಜಾನ್‌ನಲ್ಲಿ 2025 ಮೇ 26ರಂದು ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಷರೀಫ್, ಭಾರತದ ಬ್ರಹ್ಮೋಸ್‌ ಕ್ಷಿಪಣಿ ದಾಳಿಯನ್ನು ಒಪ್ಪಿಕೊಂಡರು.
ʼಪಾಕಿಸ್ತಾನದ ಸಶಸ್ತ್ರ ಪಡೆಗಳು ಬೆಳಗಿನ ಪ್ರಾರ್ಥನೆಗೆ ಮುನ್ನ ಭಾರತದ ಮೇಲೆ ದಾಳಿ ಮಾಡಲು ಯೋಜಿಸಿದ್ದವುಆದರೆ ಅದು ಸಾಧ್ಯವಾಗುವ ಮೊದಲೇ ಪಾಕಿಸ್ತಾನದ ಹಲವಾರು ಪ್ರಾಂತ್ಯಗಳ ಮೇಲೆ ಬ್ರಹ್ಮೋಸ್ ಕ್ಷಿಪಣಿಗಳ ದಾಳಿ ನಡೆದವುʼ ಎಂದು ಶೆಹಬಾಜ್‌ ಹೇಳಿದರು.
"ಮೇ 9-10ರ ರಾತ್ರಿನಾವು ಭಾರತದ ಆಕ್ರಮಣಕ್ಕೆ ವ್ಯವಸ್ಥಿತವಾಗಿ ಪ್ರತಿಕ್ರಿಯಿಸಲು ನಿರ್ಧರಿಸಿದ್ದೆವು. ಫಜ್ರ್ ಪ್ರಾರ್ಥನೆಯ ನಂತರ ಬೆಳಿಗ್ಗೆ 4.30ಕ್ಕೆ ನಮ್ಮ ಸಶಸ್ತ್ರ ಪಡೆಗಳು ಪಾಠ ಕಲಿಸಲು ಸಿದ್ಧವಾಗಿದ್ದವು. ಆದರೆ ಆ ಗಂಟೆ ಬರುವ ಮೊದಲೇಭಾರತ ಮತ್ತೊಮ್ಮೆ ಬ್ರಹ್ಮೋಸ್ ಬಳಸಿ ಕ್ಷಿಪಣಿ ದಾಳಿ ನಡೆಸಿರಾವಲ್ಪಿಂಡಿಯ ವಿಮಾನ ನಿಲ್ದಾಣ ಸೇರಿದಂತೆ ಪಾಕಿಸ್ತಾನದ ವಿವಿಧ ಪ್ರಾಂತ್ಯಗಳನ್ನು ಗುರಿಯಾಗಿಸಿಕೊಂಡಿತು" ಎಂದು ಷರೀಫ್ ತಮ್ಮ ಭಾಷಣದಲ್ಲಿ ಹೇಳಿದರು.

ಏಪ್ರಿಲ್ 22 ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಅಸು ನೀಗಿದ ಬಳಿಕ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿತ್ತು.
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ಮೇ 7 ರಂದು ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆ ಪ್ರಾರಂಭಿಸಿತುಪಾಕಿಸ್ತಾನ ನಿಯಂತ್ರಣದಲ್ಲಿರುವ ಪ್ರದೇಶಗಳಲ್ಲಿ ಒಂಬತ್ತು ಸ್ಥಳಗಳಲ್ಲಿ ಭಯೋತ್ಪಾದಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಮೂಲಕ 100ಕ್ಕೂ ಹೆಚ್ಚು ಭಯೋತ್ಪಾದಕರನ್ನು ಯಮಲೋಕಕ್ಕೆ ಅಟ್ಟಿತ್ತು.
 ಈ ಕಾರ್ಯಾಚರಣೆಯಲ್ಲಿ ಭಾರತದ ವಿರುದ್ಧ ಭಯೋತ್ಪಾದಕ ದಾಳಿಗಳನ್ನು ಯೋಜಿಸುತ್ತಿದ್ದ ಮತ್ತು ನಿರ್ದೇಶಿಸುತ್ತಿದ್ದ ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳನ್ನು ನಾಶಪಡಿಸಲಾಯಿತು.
ಇದು ನಾಲ್ಕು ದಿನಗಳ ಘರ್ಷಣೆಗೆ ಕಾರಣವಾಯಿತು, ಉಭಯ ಕಡೆಗಳೂ ಡ್ರೋನ್‌ಗಳುಕ್ಷಿಪಣಿಗಳು ಮತ್ತು ದೀರ್ಘ-ಶ್ರೇಣಿಯ ಶಸ್ತ್ರಾಸ್ತ್ರಗಳನ್ನು ಬಳಸಿದವು. ಇದರಿಂದ ಸಂಪೂರ್ಣ ಯುದ್ಧದ ವಾತಾವರಣ ಸೃಷ್ಟಿಯಾಗಿತ್ತು.
ಮೇ 10 ರಂದುಭಾರತದ ಸೇನೆಯು ಅದೇ ದಿನದ ನಸುಕಿನಲ್ಲಿ ಹಲವಾರು ಮಿಲಿಟರಿ ಸೌಲಭ್ಯಗಳ ಮೇಲೆ ಪಾಕಿಸ್ತಾನ ನಡೆಸಿದ ವಿಫಲ ದಾಳಿಗೆ ಪ್ರತೀಕಾರವಾಗಿ ಮುರಿಯದ್ ಮತ್ತು ನೂರ್ ಖಾನ್ ವಾಯುನೆಲೆಗಳು ಸೇರಿದಂತೆ ಎಂಟು ಪಾಕಿಸ್ತಾನಿ ವಾಯುನೆಲೆಗಳ ಮೇಲೆ ದಾಳಿ ನಡೆಸಿತು.
ಭಾರತೀಯ ವಾಯುಪಡೆಯ ದಾಳಿಯ ಗುರಿಗಳಲ್ಲಿ ರನ್‌ವೇಗಳುಹ್ಯಾಂಗರ್‌ಗಳುಕಮಾಂಡ್ ಮತ್ತು ನಿಯಂತ್ರಣ ಕೇಂದ್ರಗಳುರಾಡಾರ್ ನೆಲೆಗಳುಕ್ಷಿಪಣಿ ತಾಣಗಳು ಮತ್ತು ಶಸ್ತ್ರಾಸ್ತ್ರ ಸಂಗ್ರಹಣಾ ಪ್ರದೇಶಗಳು ಸೇರಿದ್ದವು. ಆ ದಿನದ ನಂತರ ಪಾಕಿಸ್ತಾನದ ಮೊರೆಯನ್ನು ಅನುಸರಿಸಿ, ಉಭಯ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದವು.

ಇವುಗಳನ್ನೂ ಓದಿರಿ: 
ಆಪರೇಷನ್‌ ಸಿಂಧೂರ- ಸೇನೆಯಿಂದ ಇನ್ನೊಂದು ವಿಡಿಯೋ ಬಿಡುಗಡೆ
ಆಪರೇಷನ್‌ ಸಿಂಧೂರ IN ತುಳು…

ಯೋಜನೆತರಬೇತಿಅನುಷ್ಠಾನ: ಸಂದಿತು ನ್ಯಾಯ
ನೂರ್‌ ಖಾನ್‌ ವಾಯುನೆಲೆ ಮೇಲೆ ದಾಳಿ: ಕಡೆಗೂ ಒಪ್ಪಿದ ಶೆಹಬಾಜ್
ಪೆಹಲ್ಗಾಮ್‌ ನರಹಂತಕರು ಖತಮ್?‌
ಕೈ ಮುಗಿವೆಯುದ್ದ ಬೇಡ ಎಂದದ್ದು ಏಕೆ ಗೊತ್ತಾ?
ಆಪರೇಷನ್‌ ಸಿಂಧೂರ ಮುಗಿದಿಲ್ಲ.. ಮಾತುಕತೆ ಪಿಒಕೆ ವಾಪಸಿಗೆ ಸೀಮಿತ
"ಷರತ್ತುಬದ್ಧ" ಕದನ ವಿರಾಮಸಿಂಧೂ ನೀರು ಹರಿಯುವುದಿಲ್ಲ
ಆಪರೇಷನ್‌ ಸಿಂಧೂರ್:‌ ೩ನೇ ದಿನ ಏನೇನಾಯಿತು?

PARYAYA: ಬ್ರಹ್ಮೋಸ್‌ ದಾಳಿ: ಕಡೆಗೂ ಒಪ್ಪಿಕೊಂಡ ಪಾಕ್‌ ಪ್ರಧಾನಿ:   ಬ್ರಹ್ಮೋಸ್‌ ದಾಳಿ: ಕಡೆಗೂ ಒಪ್ಪಿಕೊಂಡ ಪಾಕ್‌ ಪ್ರಧಾನಿ ನ ವದೆಹಲಿ: ಭಾರತವು ಪಾಕಿಸ್ತಾನದ ಮೇಲೆ ಬ್ರಹೋಸ್‌ ಕ್ಷಿಪಣಿ ದಾಳಿ ನಡೆಸಿದ್ದು ನಿಜ ಎಂಬುದಾಗಿ ಪಾಕಿಸ್ತಾನದ ಪ್...

Tuesday, May 27, 2025

PARYAYA: ಕಟ್ಟಿಗೆ ಸೋಮೀ, ಕಟ್ಟಿಗೆ…!

 ಕಟ್ಟಿಗೆ ಸೋಮೀ, ಕಟ್ಟಿಗೆ…!

ಇದು ಸುವರ್ಣ ನೋಟ!

ವಿಯ ಕಣ್ಣಿಗೆ ಕಾಣದ್ದು ಕವಿಯ ಕಣ್ಣಿಗೆ ಕಾಣುತ್ತದಂತೆ. ಕವಿಯ ಕಣ್ಣಿಗೆ ಕಾಣದ್ದು?

ಛಾಯಾಗ್ರಾಹಕನ ಕಣ್ಣಿಗೆ ಕಾಣುತ್ತದೆ ನೋಡಿ.

ವಿಧಾನ ಸೌಧದ ಮುಂದೆ ಕಟ್ಟಿಗೆ ಸೋಮೀ ಕಟ್ಟಿಗೆ ಎನ್ನುತ್ತಾ ಕಟ್ಟಿಗೆ ಹೊರೆ ಹೊತ್ತುಕೊಂಡು ಹೋಗುವ  ದೃಶ್ಯ ಕಂಡದ್ದು ಹಿರಿಯ ಪತ್ರಿಕಾ ಛಾಯಾಗ್ರಾಹಕ ವಿಶ್ವನಾಥ ಸುವರ್ಣ ಅವರ ಅಂತರದೃಷ್ಟಿಗೆ. ತಕ್ಷಣ ಅದನ್ನು ಸೆರೆ ಹಿಡಿದದ್ದು ಅವರ ಕ್ಯಾಮರಾ ಕಣ್ಣು. 

ಚಿತ್ರಗಳ ಸಮೀಪ ನೋಟಕ್ಕೆ ಅವುಗಳನ್ನು ಕ್ಲಿಕ್‌ ಮಾಡಿರಿ.




ಕೆಳಗಿನವುಗಳನ್ನೂ ಓದಿರಿ: 
ನಾಗರ ʼಹೊಳೆʼಯಲ್ಲಿ ಹಿಮ-ಚಳಿ ಮೇಳ!

ಪಕ್ಷಿ ಕಂಡರೆ ಸಾಕು… ʼಶೂಟ್‌ʼ…! ಇದು ʼಸುವರ್ಣ ನೋಟʼ

೨೦೨೪ರ ಕೊನೆಯ ಸೂರ್ಯಾಸ್ತಮಾನ... ʼಸುವರ್ಣʼ ನೋಟ..!

ಹಿಂಗಾರು ಮಳೆಗೆ ತೊಯ್ದ ವಿಧಾನಸೌಧ.. ಸುವರ್ಣ ನೋಟ

ಈ ಹಕ್ಕಿ ಕೊಕ್ಕಿನ ಬಣ್ಣ ಬದಲಾಯಿಸುತ್ತದೆ..!

ಎಲ್ಲಿ ಮಾರಾಯರೇ ಈ ಆಟಇದು ಸುವರ್ಣ ನೋಟ

ಗಗನಗಾಮಿ ಕೃಷ್ಣಮೃಗ..! (ಇದು ಸುವರ್ಣ ನೋಟ)

ಶಕ್ತಿ ಸೌಧದ ಬಳಿ ʼಸುವರ್ಣ ಸೂರ್ಯ..!” ಇದು ಸುವರ್ಣ ನೋಟ

ಬದುಕಿನ ಹೋರಾಟ….!

ಬದ್ಧ ವೈರಿಗಳ ಅಪರೂಪದ ಮೈತ್ರಿ.!

ಡಾ. ರಾಜಕುಮಾರ್ ಆರೋಗ್ಯ ಸೂತ್ರ…!

ಕಥೆ ಹೇಳುವೆ… ನನ್ನ ಕಥೆ ಹೇಳುವೆ..!

ಸ್ನೇಕ್ ಬರ್ಡ್’ ಭೋಜನ ಚಮತ್ಕಾರ..!

PARYAYA: ಕಟ್ಟಿಗೆ ಸೋಮೀ, ಕಟ್ಟಿಗೆ…!:   ಕಟ್ಟಿಗೆ ಸೋಮೀ, ಕಟ್ಟಿಗೆ…! ಇದು ಸುವರ್ಣ ನೋಟ! ರ ವಿಯ ಕಣ್ಣಿಗೆ ಕಾಣದ್ದು ಕವಿಯ ಕಣ್ಣಿಗೆ ಕಾಣುತ್ತದಂತೆ. ಕವಿಯ ಕಣ್ಣಿಗೆ ಕಾಣದ್ದು? ಛಾಯಾಗ್ರಾಹಕನ ಕಣ್ಣಿಗೆ ಕಾಣು...

PARYAYA: ಆಪರೇಷನ್‌ ಸಿಂಧೂರ- ಸೇನೆಯಿಂದ ಇನ್ನೊಂದು ವಿಡಿಯೋ ಬಿಡುಗಡೆ

 ಆಪರೇಷನ್‌ ಸಿಂಧೂರ- ಸೇನೆಯಿಂದ ಇನ್ನೊಂದು ವಿಡಿಯೋ ಬಿಡುಗಡೆ

ಪಾಕಿಸ್ತಾನದ ಭೂಪ್ರದೇಶದೊಳಗಿನ ಭಯೋತ್ಪಾದಕ ಉಡಾವಣಾ ನೆಲೆಗಳ ಮೇಲೆ ಭಾರತ ನಡೆಸಿದ ಗುರಿ ದಾಳಿಗಳನ್ನು ಮತ್ತು ಪಾಕಿಸ್ತಾನ ರೇಂಜರ್‌ಗಳು ಗುಂಡಿನ ದಾಳಿಯಿಂದ ಪಲಾಯನ ಮಾಡುತ್ತಿರುವುದನ್ನು ತೋರಿಸುವ ಆಪರೇಷನ್ ಸಿಂಧೂರ್‌ನ ಸೇನಾ ಕಾರ್ಯಾಚರಣೆಯ ಹೊಸ ವಿಡಿಯೋವನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಬಿಡುಗಡೆ ಮಾಡಿದೆ.

೨೦೨೫ ಮೇ ೧೭ರ ಮಂಗಳವಾರ ಬಿಡುಗಡೆ ಮಾಡಲಾಗಿರುವ ಈ ವಿಡಿಯೋ, ಪಾಕಿಸ್ತಾನದೊಳಗೆ 2.2 ಕಿಲೋಮೀಟರ್‌ವರೆಗಿನ ಮೂರು ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ನಿಖರ ದಾಳಿಗಳನ್ನು ಮತ್ತು ಗಡಿಯಾಚೆಗಿನ ಪಾಕಿಸ್ತಾನಿ ಸೇನಾ ಠಾಣೆಗಳ ನಾಶವನ್ನು ಸೆರೆಹಿಡಿದಿದೆ.

ಪಹಲ್ಗಾಮ್‌ನಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ "ಶತ್ರು ಠಾಣೆಗಳನ್ನು ನಾಶಪಡಿಸಲಾಗಿದೆ" ಮತ್ತು ಅಂತಾರಾಷ್ಟ್ರೀಯ ಗಡಿ ಮತ್ತು ನಿಯಂತ್ರಣ ರೇಖೆಯ ಉದ್ದಕ್ಕೂ ಒಳನುಸುಳುವಿಕೆ ಪ್ರಯತ್ನಗಳನ್ನು ತಡೆಗಟ್ಟಲಾಗಿದೆ ಎಂದು ಜಮ್ಮು ಗಡಿನಾಡಿನ ಬಿಎಸ್‌ಎಫ್‌ನ ಇನ್ಸ್‌ಪೆಕ್ಟರ್ ಜನರಲ್ ಶಶಾಂಕ್ ಆನಂದ್ ಹೇಳಿದ್ದಾರೆ.

ಪಹಲ್ಗಾಮ್ ದಾಳಿಯ ನಂತರ ಪಾಕಿಸ್ತಾನಿ ರೇಂಜರ್‌ಗಳು ತಮ್ಮ ಎಂದಿನ ಮುಂಚೂಣಿಯ ಸ್ಥಾನಗಳಿಂದ ಹಿಂದೆ ಸರಿದರುಆದರೆ ಪುರುಷರು ಮತ್ತು ಮಹಿಳೆಯರನ್ನು ಒಳಗೊಂಡ ಬಿಎಸ್‌ಎಫ್ ಪಡೆಗಳು ತಮ್ಮ ನೆಲೆಯನ್ನು ಭದ್ರವಾಗಿ ಹಿಡಿದುಕೊಂಡಿದ್ದರು ಎಂದು ಅಧಿಕಾರಿ ಹೇಳಿದರು.

" ಗಡಿ ಬೇಲಿಯ ಆಚೆಗಿನ ಪಾಕ್‌ ಸೇನಾ ಠಾಣೆಗಳನ್ನೂ ನಮ್ಮ ಸಿಬ್ಬಂದಿ ನಿಭಾಯಿಸಿದ್ದಾರೆ" ಎಂದು ಅವರು ಹೇಳಿದರು.

ಮೇ 8 ರಂದು ಗಡಿಯನ್ನು ಸಮೀಪಿಸುತ್ತಿರುವ ಭಯೋತ್ಪಾದಕರ ದೊಡ್ಡ ಗುಂಪಿನ ತೀವ್ರ ಚಟುವಟಿಕೆಯನ್ನು ಬಿಎಸ್‌ಎಫ್ ಗಮನಿಸಿತು. ಒಳನುಸುಳುವಿಕೆ ಸನ್ನಿಹಿತವಾಗಿದೆ ಎಂಬ ಗುಪ್ತಚರ ಮಾಹಿತಿಯ ಮೇರೆಗೆಬಿಎಸ್‌ಎಫ್ ಪಡೆಗಳು ಸರಣಿ ಮುಂಜಾಗ್ರತಾ ದಾಳಿಗಳನ್ನು ನಡೆಸಿದವು.

"ನಾವು ಮೇ 9 ಮತ್ತು 10 ರ ಮಧ್ಯರಾತ್ರಿ ಗಡಿಯ ಬಳಿ ಲಷ್ಕರ್‌ನ ಲೂನಿ ಭಯೋತ್ಪಾದಕ ಲಾಂಚ್‌ಪ್ಯಾಡ್ ಅನ್ನು ನಾಶಪಡಿಸಿದ್ದೇವೆ" ಎಂದು ಐಜಿ ಆನಂದ್ ಹೇಳಿದರು. "ಆರ್‌ಎಸ್ ಪುರ ಸೆಕ್ಟರ್‌ನ ಎದುರಿನ ಮಸ್ತ್‌ಪುರ್ ಎಂಬ ಮತ್ತೊಂದು ಲಾಂಚ್‌ಪ್ಯಾಡ್ ಅನ್ನು ಸಹ ನಾವು ನಾಶಪಡಿಸಿದ್ದೇವೆ. ನಮ್ಮ ಕಾರ್ಯಾಚರಣೆಯ ಸಮಯದಲ್ಲಿಪಾಕಿಸ್ತಾನಿ ರೇಂಜರ್‌ಗಳು ಓಡಿಹೋಗುತ್ತಿರುವುದು ಕಂಡುಬಂದಿದೆ" ಎಂದು ಅವರು ಹೇಳಿದರು.

ಇವುಗಳನ್ನೂ ಓದಿರಿ: 
ಆಪರೇಷನ್‌ ಸಿಂಧೂರ IN ತುಳು…

ಯೋಜನೆತರಬೇತಿಅನುಷ್ಠಾನ: ಸಂದಿತು ನ್ಯಾಯ
ನೂರ್‌ ಖಾನ್‌ ವಾಯುನೆಲೆ ಮೇಲೆ ದಾಳಿ: ಕಡೆಗೂ ಒಪ್ಪಿದ ಶೆಹಬಾಜ್
ಪೆಹಲ್ಗಾಮ್‌ ನರಹಂತಕರು ಖತಮ್?‌
ಕೈ ಮುಗಿವೆಯುದ್ದ ಬೇಡ ಎಂದದ್ದು ಏಕೆ ಗೊತ್ತಾ?
ಆಪರೇಷನ್‌ ಸಿಂಧೂರ ಮುಗಿದಿಲ್ಲ.. ಮಾತುಕತೆ ಪಿಒಕೆ ವಾಪಸಿಗೆ ಸೀಮಿತ
"ಷರತ್ತುಬದ್ಧ" ಕದನ ವಿರಾಮಸಿಂಧೂ ನೀರು ಹರಿಯುವುದಿಲ್ಲ
ಆಪರೇಷನ್‌ ಸಿಂಧೂರ್:‌ ೩ನೇ ದಿನ ಏನೇನಾಯಿತು?

PARYAYA: ಆಪರೇಷನ್‌ ಸಿಂಧೂರ- ಸೇನೆಯಿಂದ ಇನ್ನೊಂದು ವಿಡಿಯೋ ಬಿಡುಗಡೆ:   ಆಪರೇಷನ್‌ ಸಿಂಧೂರ- ಸೇನೆಯಿಂದ ಇನ್ನೊಂದು ವಿಡಿಯೋ ಬಿಡುಗಡೆ ಪಾ ಕಿಸ್ತಾನದ ಭೂಪ್ರದೇಶದೊಳಗಿನ ಭಯೋತ್ಪಾದಕ ಉಡಾವಣಾ ನೆಲೆಗಳ ಮೇಲೆ ಭಾರತ ನಡೆಸಿದ ಗುರಿ ದಾಳಿಗಳನ್ನು ಮತ್ತ...